ಉತ್ತರ ಕನ್ನಡ, ಕಾರವಾರ: ಅಕ್ರಮ ಕಬ್ಬಿಣದ ಅದಿರು ರಫ್ತು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಕಾರವಾರ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಎರಡು ದಿನಗಳ ಕಾಲ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ಇಡಿ ವಶಪಡಿಸಿಕೊಳ್ಳಲಾಗಿದೆ.
ಇಡಿ ಬೆಂಗಳೂರು ಘಟಕದ ಅಧಿಕಾರಿಗಳು ಆಗಸ್ಟ್ 13 ಮತ್ತು 14ರಂದು ಕರ್ನಾಟಕದ ಕಾರವಾರ ಶಾಸಕ ಸತೀಶ್ ಸೈಲ್ ಮನೆ ಮತ್ತು ಇನ್ನಿತರ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದ್ದರು.
ಈ ದಾಳಿಯ ಸಮಯದಲ್ಲಿ, ₹1.68 ಕೋಟಿ ನಗದು ಹಾಗೂ 6.75 ಕೆಜಿ ತೂಕದ ಚಿನ್ನಾಭರಣ ಮತ್ತು ಬಂಗಾರದ ಗಟ್ಟಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು ₹14.13 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಲಾಗಿದೆ (frozen) ಎಂದು ಇಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ತನಿಖೆ ನಡೆಯುತ್ತಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಸತೀಶ್ ಸೈಲ್ ಮತ್ತು ಇತರರ ವಿರುದ್ಧ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದ ತನಿಖೆ ಮುಂದುವರಿದಿದೆ. ಶೋಧದ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳು, ಇ-ಮೇಲ್ಗಳು ಮತ್ತು ಇತರ ಸಾಕ್ಷ್ಯಗಳನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…