ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿಂಕೆಬಚ್ಚಹಳ್ಳಿ ಬಯಲು ಪ್ರದೇಶದಲ್ಲಿ ನಡೆದಿದೆ…
ಮಹಿಳೆ ಸಾವು ಆಕಸ್ಮಿಕವೋ, ಆತ್ಮಹತ್ಯೆಯೋ, ಕೊಲೆಯೋ ಎಂಬುದು ತಿಳಿದುಬಂದಿರುವುದಿಲ್ಲ. ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಸದ್ಯ ಮೃತ ಮಹಿಳೆಯ ಹೆಸರು, ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ..
ಟಯೋಟಾ ಗ್ಲಾಂಜಾ ಕಾರಿನ ಮಾಲೀಕ ಮಾರಸಂದ್ರ ಸುರೇಶ್ ಎಂದು ತಿಳಿದುಬಂದಿದೆ.. ಕಾರಿನ ಮಾಲೀಕನ ಬಳಿ ಇಂದು ಬೆಳಗ್ಗೆ ಆಸ್ಪತ್ರೆಗೆ ಹೋಗಬೇಕೆಂದು ರಾಮಾಂಜಿನಿ ಎಂಬ ವ್ಯಕ್ತಿ ಕಾರು ಪಡೆದು ಬರುತ್ತಾನೆ..
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಾಮಾಂಜಿನಿ ಶರ್ಟ್ ಕಳಚಿ ಮೊಬೈಲ್ ಬಿಸಾಡಿ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ…
ಸ್ಥಳದಲ್ಲಿ ಮೊಬೈಲ್, ಶರ್ಟ್ ಪತ್ತೆಯಾಗಿದೆ. ಮಹಿಳೆ ಮಾಂಗಲ್ಯ ಸರ ಕೂಡ ಪತ್ತೆಯಾಗಿದೆ.
ಸ್ಥಳಕ್ಕೆ ಸೋಕೋ ಟೀಂ, ವೈದ್ಯರು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…