ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶದಲ್ಲಿ ನಡೆದಿತ್ತು…
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಕಿ ಕಾಣಿಸಿಕೊಂಡ ನಂತರ ಕಾರಿನಿಂದ ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದ ರಾಮಾಂಜಿನಪ್ಪ ಎಂಬ ವ್ಯಕ್ತಿ ಕೂಡ ಬಿಡದಿ ವ್ಯಾಪ್ತಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ…
ಮೃತ ರಾಮಾಂಜಿನಪ್ಪ ಮಾರಸಂದ್ರ ಗ್ರಾಮದ ನಿವಾಸಿಯಾಗಿದ್ದು, ಮೇ.2ರಂದು ಮಾರಸಂದ್ರ ಸುರೇಶ್ ಎಂಬುವರ ಗ್ಲಾಂಜಾ ಕಾರನ್ನು ಪಡೆದು ಮಹಿಳೆಯೊಬ್ಬರನ್ನು ಕಾರಿನಲ್ಲಿ ಕರೆದುಕೊಂಡು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶಕ್ಕೆ ಬಂದಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮಹಿಳೆ ಸುಟ್ಟುಕರಕಲಾಗಿದ್ದಳು. ಆದರೆ ರಾಮಾಂಜಿನಪ್ಪ ಪ್ರಾಣಾಪಾಯದಿಂದ ಪಾರಾಗಿದ್ದ. ಸ್ಥಳದಲ್ಲಿ ಮೊಬೈಲ್, ಶರ್ಟ್ ಎಸೆದು ಅಲ್ಲಿಂದ ಪರಾರಿಯಾಗಿದ್ದ. ಘಟನೆ ನಂತರ ತಲೆಮರೆಸಿಕೊಂಡಿದ್ದ, ಇದೀಗ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.
ಗೌರಿಬಿದನೂರು ಮೂಲದ ಸುಜಾತಾ (35), ದೇವನಹಳ್ಳಿ ಮೂಲದ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಗೌರಿಬಿದನೂರಿನಿಂದ ಗಂಡನ ಮನೆ ಅಂದರೆ ದೇವನಹಳ್ಳಿಗೆ ಹೋಗುತ್ತೇನೆ ಎಂದು ಮನೆಯಿಂದ ಬಂದು ಬೀದಿ ಹೆಣವಾಗಿದ್ದಾಳೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…