ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶದಲ್ಲಿ ನಡೆದಿತ್ತು…
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಕಿ ಕಾಣಿಸಿಕೊಂಡ ನಂತರ ಕಾರಿನಿಂದ ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದ ರಾಮಾಂಜಿನಪ್ಪ ಎಂಬ ವ್ಯಕ್ತಿ ಕೂಡ ಬಿಡದಿ ವ್ಯಾಪ್ತಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ…
ಮೃತ ರಾಮಾಂಜಿನಪ್ಪ ಮಾರಸಂದ್ರ ಗ್ರಾಮದ ನಿವಾಸಿಯಾಗಿದ್ದು, ಮೇ.2ರಂದು ಮಾರಸಂದ್ರ ಸುರೇಶ್ ಎಂಬುವರ ಗ್ಲಾಂಜಾ ಕಾರನ್ನು ಪಡೆದು ಮಹಿಳೆಯೊಬ್ಬರನ್ನು ಕಾರಿನಲ್ಲಿ ಕರೆದುಕೊಂಡು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶಕ್ಕೆ ಬಂದಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮಹಿಳೆ ಸುಟ್ಟುಕರಕಲಾಗಿದ್ದಳು. ಆದರೆ ರಾಮಾಂಜಿನಪ್ಪ ಪ್ರಾಣಾಪಾಯದಿಂದ ಪಾರಾಗಿದ್ದ. ಸ್ಥಳದಲ್ಲಿ ಮೊಬೈಲ್, ಶರ್ಟ್ ಎಸೆದು ಅಲ್ಲಿಂದ ಪರಾರಿಯಾಗಿದ್ದ. ಘಟನೆ ನಂತರ ತಲೆಮರೆಸಿಕೊಂಡಿದ್ದ, ಇದೀಗ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.
ಗೌರಿಬಿದನೂರು ಮೂಲದ ಸುಜಾತಾ (35), ದೇವನಹಳ್ಳಿ ಮೂಲದ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಗೌರಿಬಿದನೂರಿನಿಂದ ಗಂಡನ ಮನೆ ಅಂದರೆ ದೇವನಹಳ್ಳಿಗೆ ಹೋಗುತ್ತೇನೆ ಎಂದು ಮನೆಯಿಂದ ಬಂದು ಬೀದಿ ಹೆಣವಾಗಿದ್ದಾಳೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…