ದೊಡ್ಡಬಳ್ಳಾಪುರ: ಕಾರಿನ ಗಾಜು ಒಡೆದು ವ್ಯಾನಿಟಿಬ್ಯಾಗ್ ನಲ್ಲಿಟ್ಟಿದ್ದ 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ದೇವನಹಳ್ಳಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.
ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಹಶಿಕ್ಷಕಿಯಾಗಿರುವ ತೇಜಮಣಿ ಅವರು ಸಹವರ್ತಿ ಶಿಕ್ಷಕರೊಂದಿಗೆ ಭಾನುವಾರ ರಾತ್ರಿ ಪರಿಚಯಸ್ಥರ ಮದುವೆ ಹೋಗಿದ್ದರು. ರಾತ್ರಿ ತಮ್ಮ ವ್ಯಾನಿಟಿ ಬ್ಯಾಗ್ ನ್ನು ಕಾರಿನಲ್ಲಿಟ್ಟು ಆರತಕ್ಷತೆಗೆ ತೆರಳಿದ್ದ ತೇಜಮಣಿ ಅವರು ಅದೇ ರಾತ್ರಿ ಸುಮಾರು 9:30ಕ್ಕೆ ಬಂದು ನೋಡಿದಾಗ ಕಾರಿನ ಹಿಂಬದಿಯ ಗಾಜು ಒಡೆದಿತ್ತು, ವ್ಯಾನಿಟಿ ಬ್ಯಾಗ್ ನಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಸರ, ಒಂದೂವರೆ ಗ್ರಾಮ ತೂಕದ ಫಿಷ್ ಪೆಂಡೆಂಟ್, ಮೂರುವರೆ ತೂಕದ ಸ್ಟಡ್(ವೈಟ್ ಸ್ಟೋನ್) ನ್ನು ಕಳ್ಳರು ದೋಚಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…