ದೊಡ್ಡಬಳ್ಳಾಪುರ: ಕಾರಿನ ಗಾಜು ಒಡೆದು ವ್ಯಾನಿಟಿಬ್ಯಾಗ್ ನಲ್ಲಿಟ್ಟಿದ್ದ 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ದೇವನಹಳ್ಳಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.
ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಹಶಿಕ್ಷಕಿಯಾಗಿರುವ ತೇಜಮಣಿ ಅವರು ಸಹವರ್ತಿ ಶಿಕ್ಷಕರೊಂದಿಗೆ ಭಾನುವಾರ ರಾತ್ರಿ ಪರಿಚಯಸ್ಥರ ಮದುವೆ ಹೋಗಿದ್ದರು. ರಾತ್ರಿ ತಮ್ಮ ವ್ಯಾನಿಟಿ ಬ್ಯಾಗ್ ನ್ನು ಕಾರಿನಲ್ಲಿಟ್ಟು ಆರತಕ್ಷತೆಗೆ ತೆರಳಿದ್ದ ತೇಜಮಣಿ ಅವರು ಅದೇ ರಾತ್ರಿ ಸುಮಾರು 9:30ಕ್ಕೆ ಬಂದು ನೋಡಿದಾಗ ಕಾರಿನ ಹಿಂಬದಿಯ ಗಾಜು ಒಡೆದಿತ್ತು, ವ್ಯಾನಿಟಿ ಬ್ಯಾಗ್ ನಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಸರ, ಒಂದೂವರೆ ಗ್ರಾಮ ತೂಕದ ಫಿಷ್ ಪೆಂಡೆಂಟ್, ಮೂರುವರೆ ತೂಕದ ಸ್ಟಡ್(ವೈಟ್ ಸ್ಟೋನ್) ನ್ನು ಕಳ್ಳರು ದೋಚಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…