ಕಾರು ಅಪಘಾತದಲ್ಲಿ ಮೂವರು ಅಪ್ತ ಸ್ನೇಹಿತರು ಸ್ಥಳದಲ್ಲೇ ಸಾವು

ಕಾರು ಅಪಘಾತದಲ್ಲಿ ಮೂವರು ಅಪ್ತ ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ನೈಸ್ ರಸ್ತೆಯ ಟೋಲ್ ಬಳಿ ನಡೆದಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್, ಇದೇ ಗ್ರಾಮದ ಕುಮಾರ್, ನಂಜೇಶ್ ಮೂರು ಜನ ಗೋವಾಗೆ ತೆರಳಬೇಕೆಂದು ಬೆಂಗಳೂರಿನತ್ತ ಬರುವ ವೇಳೆ ಈ ದುರ್ಗಟನೆ ನಡೆದಿದೆ.

ಆಕಸ್ಮಿಕವಾಗಿ ಕಾರಿನ ಕಂಟ್ರೋಲ್​ ಮಿಸ್​ ಆಗಿ ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಕಾರು ಜಂಪ್​ ಆಗಿದೆ.. ಹೀಗೆ ಮಿಸ್​ ಆದ ಕಂಟ್ರೋಲ್​ನಿಂದ ಆಗಬಾರದ ದುರಂತ ಸಂಭವಿಸಿ ಬಿಟ್ಟಿದೆ. ಒಂದು ಕಡೆ ಎಕ್ಸ್ ಯು ವಿ 700 ಕಾರು ಕಂಪ್ಲೀಟ್​ ಡ್ಯಾಮೇಜ್​ ಆಗಿದ್ದರೆ, ಮತ್ತೊಂದು​ ಕಡೆ ಸ್ಕಾರ್ಪಿಯೋ ಪೀಸ್​ ಪೀಸ್​ ಆಗಿದೆ.

ಮಳೆಯಿಂದಾಗಿ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರೋ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲೇ ಇದ್ದ ವಾಹನ ಸವಾರರು ವಾಹನದಲ್ಲಿ ಸಿಲುಕಿದ್ದವರನ್ನ ರಕ್ಷಿಸಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ: ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವು

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…

18 minutes ago

2100 ಎಕರೆ ಭೂ ಸ್ವಾಧೀನ ಕೈಬಿಡಬೇಕು- ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು…

1 hour ago

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

16 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

18 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

21 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

21 hours ago