ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಕೈ ಮರ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಾಗಿದೆ.
ಮಾರಸಂದ್ರ ಕಡೆಯಿಂದ ಬರುತ್ತಿದ್ದ ಕಾರಿಗೆ ದೊಡ್ಡಬಳ್ಳಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಎರಡೂ ಡೋರ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿದ್ದು, ಟೋಲ್ ತಪ್ಪಿಸುವ ಸಲುವಾಗಿ ಈ ರಸ್ತೆಗಳಲ್ಲಿ ಬರುತ್ತಿರುವ ಲಾರಿಗಳೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಒಂದು ಕಡೆ ರಸ್ತೆಯಲ್ಲಿ ಗುಂಡಿಗಳು, ಮತ್ತೊಂದು ಕಡೆ ಭಾರೀ ವಾಹನಗಳ ಸಂಚಾರದಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಆಲಹಳ್ಳಿ, ಅರಳುಮಲ್ಲಿಗೆ, ಕಾಡನೂರು ಕೈ ಮರ, ಮಧುರೆ ವರೆಗೂ ರಸ್ತೆ ಪಕ್ಕದಲ್ಲಿ ಹೆಚ್ಚಿನ ಶಾಲೆಗಳಿದ್ದು, ಶಾಲಾಮಕ್ಕಳು ರಸ್ತೆ ದಾಟಲು ಪರದಾಡುವಂತಾಗಿದೆ.
ಈ ಬಗ್ಗೆ ಸಂಭಂದಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವಂತೆ. ಸ್ಥಳೀಯರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…