ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.
ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.
ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.
ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.
ದುಬೈ 24 ಅವರ್ಸ್ ರೇಸ್’ (24 ಹೆಚ್ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.
ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…