Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 hour ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 hour ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 hour ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

2 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

3 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

7 hours ago