Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

9 minutes ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago