ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.
ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.
ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.
ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.
ದುಬೈ 24 ಅವರ್ಸ್ ರೇಸ್’ (24 ಹೆಚ್ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.
ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…