Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

7 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

20 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

23 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago