ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.
ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.
ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.
ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.
ದುಬೈ 24 ಅವರ್ಸ್ ರೇಸ್’ (24 ಹೆಚ್ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.
ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…