Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

4 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

16 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

16 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

21 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago