Categories: Accident

ಕಾರು ರೇಸ್​ ಅಭ್ಯಾಸ ಮಾಡುವಾಗ ತಲಾ ಅಜಿತ್ ಗೆ ಅಪಘಾತ: 180 ಕಿಮೀ ವೇಗದಲ್ಲಿದ್ದ ರೇಸ್ ಕಾರು ತಡೆಗೋಡೆಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಕಾರು ಪೀಸ್ ಪೀಸ್: ಸದ್ಯ ಅಜಿತ್ ಈಗ ಹೇಗಿದ್ದಾರೆ…?

ಕಾಲಿವುಡ್ ಖ್ಯಾತ ನಟ ತಲಾ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನ ನಂತರ ಅವರು ಕಾರು, ಬೈಕ್ ರೇಸ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

ಅದರಲ್ಲೂ ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಆದರೆ ಅದರಿಂದ ಈಗ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ.

ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು ಎನ್ನಲಾಗಿದೆ.

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

10 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

10 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

23 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 days ago