ಕಾರು‌ ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆ: ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ‌ ಹಚ್ಚಿದ ಅಣ್ಣ

ಕಾರು‌ ಹಾಗೂ ಜಮೀನು ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿದ್ದು, ಗಲಾಟೆ ತಾರಕಕ್ಕೇರಿ ಅಣ್ಣನೇ  ತಮ್ಮನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಖರೆ ಗ್ರಾಮದಲ್ಲಿ ನಡೆದಿದೆ.

ಅಣ್ಣ ವೆಂಕಟೇಶನಿಂದ‌ ಕೊಲೆಯಾಗಿರುವ ತಮ್ಮ ಜಗದೀಶ್

ಕಳೆದ ಮೂರು ದಿನಗಳ ಹಿಂದೆ ಅಣ್ಣ-ತಮ್ಮಂದಿರ ನಡುವೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿದೆ.

ಅವಿಭಕ್ತ ಕುಟುಂಬವಿದ್ದಾಗ ತಮ್ಮ ಜಗದೀಶ್ ಹೆಸರಲ್ಲಿ ಕಾರನ್ನ ಖರೀದಿ ಮಾಡಲಾಗಿತ್ತು. ಆದರೆ ಇಬ್ಬರೂ ಮದುವೆಯಾದ ನಂತರ ಬೇರೆ ಬೇರೆ ವಾಸವಾಗಿದ್ದರು.

ಕಾರು ತಮ್ಮನ ಹೆಸರಲ್ಲಿ ಇದಿದ್ದರಿಂದ ಕಾರು ತಮ್ಮನ ಬಳಿಯೇ ಇತ್ತು. ನನಗೂ ಕಾರು ಬೇಕು ಎಂದು‌ ಅಣ್ಣ ಪಟ್ಟುಹಿಡಿದಿದ್ದ, ಆದರೆ ತಮ್ಮ ಕಾರು ಕೊಡಲ್ಲ ಎಂದು ಅಂದಿದಕ್ಕೆ ಅಣ್ಣ-ತಮ್ಮಂದಿರ ನಡುವೆ ಕಿರಿಕ್ ಆಗಿದೆ.

ಕಾರು ಕೊಡುವವರಿಗೂ ಬಿಡುವುದಿಲ್ಲ ಎಂದು ಅಣ್ಣ ಪೆಟ್ರೋಲ್ ಹಿಡಿದು ಕಾರಿಗೆ ಅಡ್ಡನಿಂತು, ತಮ್ಮನ ಮೇಲೆ ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ಪರಿಣಾಮ ತಮ್ಮನಿಗೆ ಗಂಭೀರ ಗಾಯಗಳಾಗಿದ್ದವು.

ಕೂಡಲೇ ಗಾಯಾಳು ತಮ್ಮನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಆಸ್ವತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದಾನೆ.

ಸದ್ಯ ಜಮೀನು ಭಾಗವಾಗುವವರೆಗೂ ಅಂತ್ಯ ಸಂಸ್ಕಾರ ಮಾಡಲ್ಲ‌ ಅಂತ ಕುಟುಂಬಸ್ಥರು ಪಟ್ಟುಹಿಡಿದ್ದಾರೆ.

ಆರೋಪಿ ವೆಂಕಟೇಶ್‌ನನ್ನ ದೇವನಹಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು.

Ramesh Babu

Journalist

Recent Posts

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…

3 hours ago

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

15 hours ago

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

17 hours ago

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

17 hours ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

22 hours ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

1 day ago