ಟೊಯೋಟಾ ಇಟಿಯೋಸ್ ಕಾರೊಂದು ಎರಡು ಟ್ರಕ್ ಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಭಾನುವಾರ ಮುಂಜಾನೆ ನಡೆದಿದೆ.
ನಾರಾಯಣಪ್ಪ, ಸುನಂದಮ್ಮ, ರವಿಕುಮಾರ್, ನೇತ್ರಾವತಿ, ಚೇತನ್ (ಬಾಲಕ), ಗುಣಶೇಖರ್ (ಡ್ರೈವರ್) ಮೃತ ದುರ್ದೈವಿಗಳು. ದೇವನಹಳ್ಳಿ ಬಳಿಯ ಕಾರಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…