ಟೊಯೋಟಾ ಇಟಿಯೋಸ್ ಕಾರೊಂದು ಎರಡು ಟ್ರಕ್ ಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಭಾನುವಾರ ಮುಂಜಾನೆ ನಡೆದಿದೆ.
ನಾರಾಯಣಪ್ಪ, ಸುನಂದಮ್ಮ, ರವಿಕುಮಾರ್, ನೇತ್ರಾವತಿ, ಚೇತನ್ (ಬಾಲಕ), ಗುಣಶೇಖರ್ (ಡ್ರೈವರ್) ಮೃತ ದುರ್ದೈವಿಗಳು. ದೇವನಹಳ್ಳಿ ಬಳಿಯ ಕಾರಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…