ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…