Categories: ರಾಜ್ಯ

ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ

ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

49 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago