Categories: ಮೈಸೂರು

ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಸಿಗಬೇಕು- ಸಿಎಂ ಸಿದ್ದರಾಮಯ್ಯ

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ  ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.

ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago