Categories: ಮೈಸೂರು

ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಸಿಗಬೇಕು- ಸಿಎಂ ಸಿದ್ದರಾಮಯ್ಯ

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ  ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.

ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

9 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

10 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

16 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

17 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

22 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago