ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.
ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…