ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.
ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…