ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.
ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…