ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.
ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…