Categories: ಮೈಸೂರು

ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಸಿಗಬೇಕು- ಸಿಎಂ ಸಿದ್ದರಾಮಯ್ಯ

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ  ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ ಎಂದರು.

ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

Ramesh Babu

Journalist

Recent Posts

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

2 minutes ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

3 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

7 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

8 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

8 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

18 hours ago