Categories: ಲೇಖನ

ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…..

ಕಾರ್ಗಿಲ್………

ಭಾರತ ಎಂಬುದು ಒಂದು ಪ್ರೀತಿಯ ಮರ………

ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ……..

ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ. ಕಳೆದ ವರ್ಷ ಕಾರ್ಗಿಲ್ ಯುದ್ಧ ನಡೆದ ಕಾಶ್ಮೀರದ ಆ ಹಿಮಾಚ್ಛಾದಿತ ಪ್ರದೇಶದಲ್ಲಿರುವ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದೆ. ಆ ಯುದ್ಧದಲ್ಲಿ ಮಡಿದವರ ಸಮಾಧಿ, ಪ್ರತಿಕೃತಿ, ಹೆಸರುಗಳು ಮತ್ತು ಆ ಬಗ್ಗೆ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಸಹ ವೀಕ್ಷಿಸಿದೆ…..

ಅತ್ಯಂತ ಕಡಿಮೆ ಆಮ್ಲಜನಕ, ಮೈನಸ್ ಡಿಗ್ರಿ ಸೆಲ್ಸಿಯಸ್ ನ ಕೊರೆಯುವ ಚಳಿ, ಕಣ್ಣ ನೋಟಕ್ಕೆ ನಿಲುಕದಷ್ಟು ಎತ್ತರದ ಪರ್ವತಗಳು ಮತ್ತು ಆಳದ ಪ್ರಪಾತಗಳ ನಡುವೆ ಮನುಷ್ಯ ಜೀವಿ ಶತ್ರುಗಳೊಂದಿಗೆ ಹೋರಾಡುವುದನ್ನು ಕಲ್ಪಿಸಿಕೊಳ್ಳುವುದು ಸಾಮಾನ್ಯರಿಗೆ ಸಾಧ್ಯವಿಲ್ಲ. ಅಷ್ಟು ಭಯಾನಕ ಪ್ರದೇಶವದು. ಪ್ರವಾಸಿಗರಿಗೆ ಸುಂದರ ರಮಣೀಯ ಎನಿಸುತ್ತದೆ. ಆದರೆ ಜೀವದ ಹಂಗು ತೊರೆದು ಹೋರಾಡುವ ಯೋಧರಿಗೆ……

ಸೈನಿಕರ ಸಾಹಸಗಾಥೆಗಳು ರೋಮಾಂಚನ ಮತ್ತು ಅಭಿಮಾನ ಮೂಡಿಸುವಂತೆ ಇರುತ್ತದೆ ನಿಜ ಹಾಗೆಯೇ ಅವರ ಸಾವು ನೋವುಗಳು ಒಡಲಾಳದಲ್ಲಿ ಕರುಳು ಕಿವುಚಿದಂತಾಗುತ್ತದೆ. ಅವರು ಬದುಕಿದ್ದಿದ್ದರೆ……,

ಆದ್ದರಿಂದ ಅದನ್ನು ವಿಜಯೋತ್ಸವ ಎಂದು ಕರೆಯಲು ಮನಸ್ಸು ಹಿಂಜರಿಯುತ್ತದೆ. ಆ ಯುದ್ದದಲ್ಲಿ ಕೇವಲ ಭಾರತದ ಸೈನಿಕರು ಮಾತ್ರವಲ್ಲ ವಿರೋಧಿ ಪಡೆಯ ಇನ್ನೂ ಹಲವಾರು ಜನರು ಸತ್ತಿದ್ದಾರೆ. ಸಾವಿನ ಆಟ ವಿಜಯೋತ್ಸವ ಆಗುವುದಿಲ್ಲ. ಆದರೂ ಸಾಮಾನ್ಯ ಮನಸ್ಥಿತಿಯಲ್ಲಿ ಆ ಘಟನೆಗಳನ್ನು ನೋಡೋಣ….

ಭಾರತ ಎಂಬುದು ಒಂದು ಪ್ರೀತಿಯ ಮರ…..

ಕಾರ್ಗಿಲ್ ಯುದ್ಧ…..

ಮೇ 3 – ಜುಲೈ ‌26 – 1999

ಭಾರತದ ಜಯ – ಪಾಕಿಸ್ತಾನದ ಸೋಲು –
ಪಾಕಿಸ್ತಾನದ್ದೇ ಕುತಂತ್ರ —-

ಆದರೆ ಇದು ವಿಜಯೋತ್ಸವವೇ ಅಥವಾ ಹುತಾತ್ಮ ಜೀವಗಳ ಆಶ್ರುತರ್ಪಣವೇ…….

ಸತ್ತಿದ್ದು ಮನುಷ್ಯರಾಗಿದ್ದು ಬದುಕಲು ಸೈನಿಕ ಎಂಬ ದೇಶ ಸೇವೆಯ ವೃತ್ತಿ ಆರಿಸಿಕೊಂಡ ಭಾರತ ಮತ್ತು ಪಾಕಿಸ್ತಾನದ ಅಮಾಯಕ ಸೈನಿಕರು ಜೊತೆಗೆ ದಾರಿ ತಪ್ಪಿ ಭಯೋತ್ಪಾದಕರಾದವರೂ ಸೇರಿದ್ದರು.

ಪರ್ವೇಜ್ ಮುಷರಫ್ ಎಂಬ ವ್ಯಕ್ತಿಯ ತೆವಲಿಗೆ ಸಾವಿರಾರು ಜೀವಗಳ ಬಲಿ……..

ಆಕ್ರಮಣ ಮಾಡಿದವರೂ, ರಕ್ಷಣೆಗೆ ಹೋರಾಡಿದವರು ಇಬ್ಬರೂ ಹತ್ಯೆಗೊಳಗಾದರು. ಗೌರವ ಪೂರ್ವಕವಾಗಿ ಸತ್ತ ಸೈನಿಕರನ್ನು ಹುತಾತ್ಮರು ಎಂದು ಎರಡೂ ದೇಶದ ಜನ ಕರೆಯಬಹುದು. ಆದರೆ ಅವರನ್ನು ಮತ್ತೆ ಮರಳಲಾಗದ ಲೋಕಕ್ಕೆ ನಾವೇ ಕಳುಹಿಸಿದೆವು.

ಭಾರತೀಯರಾದ ನಾವು ಇದನ್ನು ಸಂಭ್ರಮದಿಂದ ವಿಜಯೋತ್ಸವ ಎಂದು ಆಚರಿಸುತ್ತೇವೆ. ಪಾಕಿಸ್ತಾನಿಯರು ಇದನ್ನು ಮರೆಯಲು ಪ್ರಯತ್ನಿಸುತ್ತಾರೆ.

ಆದರೆ ಆ ಘಟನೆಯಲ್ಲಿ ಸತ್ತ ಯೋದರ ತಂದೆ ತಾಯಿ ಮಗ ಮಗಳು ಅಣ್ಣ ತಂಗಿ ತಮ್ಮ ಗೆಳೆಯ ಮುಂತಾದವರು ನೆನಪಿನ ನೋವಿನಿಂದ ನರಳುತ್ತಾರೆ – ಮುದುಡುತ್ತಾರೆ.

ಮಹಾಭಾರತದಲ್ಲಿ ವ್ಯಾಸರು ತುಂಬಾ ಸೂಕ್ಷ್ಮವಾಗಿ ಮತ್ತು ಮಾರ್ಮಿಕವಾಗಿ ಇದನ್ನು ಚಿತ್ರಿಸಿದ್ದಾರೆ. ಯುದ್ಧವನ್ನು ಸಂಪೂರ್ಣ ಗೆದ್ದ ಪಾಂಡವರು ಅದರ ಸಾವು ನೋವಿನ ಭೀಕರತೆಗೆ ಮನನೊಂದು ವೈರಾಗ್ಯದಿಂದ ತಮ್ಮ ಉತ್ತರಾಧಿಕಾರಿಗಳಿಗೆ ರಾಜ್ಯವನ್ನು ಒಪ್ಪಿಸಿ ತೀರ್ಥಯಾತ್ರೆಗೆ ( ಸ್ವರ್ಗಕ್ಕೆ ) ಹೊರಡುತ್ತಾರೆ. ಅವರು ಆ ಯುದ್ದದ ವಿಜಯವನ್ನು ಸಂಭ್ರಮಿಸುವುದಿಲ್ಲ. ಏಕೆಂದರೆ….

ಯುದ್ಧ ಒಂದು ಘರ್ಷಣೆ,
ಯುದ್ಧ ಒಂದು ಸಾವಿನ ಆಟ,
ಯುದ್ಧ ಒಂದು ದುರಂತ,
ಯುದ್ಧ ಒಂದು ಅಹಂಕಾರ,
ಯುದ್ಧ ಒಂದು ದುರಾಸೆ,
ಯುದ್ಧ ಒಂದು ಪಾಠ,
ಯುದ್ಧ ಒಂದು ಅನುಭವ,
ಯುದ್ಧ ಒಂದು ರಕ್ಷಣಾ ವ್ಯೂಹ,
ಯುದ್ಧ ಒಂದು ಅನಿವಾರ್ಯ ಕರ್ತವ್ಯ,

ಸಂಭ್ರಮಕ್ಕಿಂತ ಸಹಾನುಭೂತಿಯೇ ಹೆಚ್ಚು ಪರಿಣಾಮಕಾರಿ.

ಯುದ್ಧ ಮಾಡಿದವರು ನಾವಲ್ಲ,
ಯುದ್ಧ ಗೆದ್ದವರು ನಾವಲ್ಲ,
ಅದು ಸೈನಿಕರು.
ನಾವೇನಿದ್ದರೂ ಅದರ ಫಲಾನುಭವಿಗಳು ಮಾತ್ರ.

ದುಷ್ಟ ಪರ್ವೇಜ್ ಮುಷರಫ್ ಎಂಬುವವನ ಅಧಿಕಾರ ದಾಹಕ್ಕೆ, ಶಾಶ್ವತ ಗಾಯಗಳಾದ, ಶಾಶ್ವತ ಶವಗಳಾದ ಪಾಕಿಸ್ತಾನ ಮತ್ತು ಭಾರತದ ಸೈನಿಕರನ್ನು, ಅವರ ಪ್ರೀತಿ ಪಾತ್ರರನ್ನು ಮೌನದಿಂದ ನೆನೆಯುತ್ತಾ………

ಸತ್ತವರು ಭೂಮಿಯ ಮೇಲಿನ ಮನುಷ್ಯ ಪ್ರಾಣಿಗಳು…..

ಉಳಿದದ್ದೆಲ್ಲಾ ಅವನ ಭ್ರಮೆ ಮತ್ತು ಸ್ವಾರ್ಥ…..

ಮನುಷ್ಯ ಕುಲಂ ತಾನೊಂದು ವಲಂ…..

ವಿಶ್ವ ಮಾನವ ಪ್ರಜ್ಞೆಯೇ ನಮ್ಮನ್ನು ವಿಶಾಲತೆಯೆಡೆಗೆ – ನೆಮ್ಮದಿಯೆಡೆಗೆ – ಬದುಕಿನ ‌ಸಾರ್ಥಕತೆಯೆಡೆಗೆ ಸಾಗುವಂತೆ ಮಾಡುತ್ತದೆ.

ಹೌದು ಹೇಳಬಹುದು…..

ಭಾರತ ಗೆದ್ದಿತು, ದುಷ್ಟ ಪಾಕಿಸ್ತಾನ ಸೋತಿತು.
ಅದರ ನೆನಪಿನಲ್ಲಿ ಸಂಭ್ರಮ ಆಚರಿಸಿ. ಅದಕ್ಕೆ ಸಾಕಷ್ಟು ಜನರು ಚಪ್ಪಾಳೆ ಹೊಡೆಯಬಹುದು. ಆದರೆ ಈ ದಿನದ ನೆನಪುಗಳು ಸಾರ್ಥಕವಾಗುವುದು ಮುಂದೆ ಯುದ್ದವಾಗದಂತೆ ತಡೆದು ಸೈನಿಕರು ಸಾಯದಂತೆ ತಡೆಯುವ ಮಾರ್ಗಗಳ ಹುಡುಕಾಟದಲ್ಲಿ ಮಾತ್ರ.

ದೇಶದ ರಕ್ಷಣೆ ಬಹಳ ಮುಖ್ಯ. ಇದೇ ಬಹುದೊಡ್ಡ ಸತ್ಯ. ಅದಕ್ಕೆ ಬಲಶಾಲಿಗಳಾಗಬೇಕು ನಿಜ.‌ ಆದರೆ ಯಾರು ಬಲಶಾಲಿಗಳು, ಎಷ್ಟು ಬಲಶಾಲಿಗಳು, ಯಾವುದರಲ್ಲಿ ಬಲಶಾಲಿಗಳು, ಆ ಬಲಶಾಲಿಗಳು ಎಷ್ಟು ಶಾಶ್ವತ ಎಂಬ ಕಾಡುವ ಪ್ರಶ್ನೆಗೆ…..

ಒಂದು ಮರಕ್ಕಿಂತ ಮತ್ತೊಂದು ‌ದೊಡ್ಡ ಮರ ಬೆಳೆಯುತ್ತಲೇ ಇರುತ್ತದೆ. ಪ್ರತಿ ಮರವೂ ತಾನೇ ಬಲಶಾಲಿ ಎಂದು ಕೊಳ್ಳುತ್ತದೆ. ಆದರೆ ದ್ವೇಷದ ಮರ ತನ್ನ ಅಹಂ ನಿಂದಲೇ ನಾಶವಾಗುತ್ತದೆ. ಪ್ರೀತಿಯ ಮರ ಬೆಳೆಯುತ್ತಲೇ ಇರುತ್ತದೆ…..

ಭಾರತ ಎಂಬುದು ಒಂದು ಪ್ರೀತಿಯ ಮರ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

6 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

8 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

9 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

15 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

16 hours ago