Categories: ಲೇಖನ

ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…..

ಕಾರ್ಗಿಲ್………

ಭಾರತ ಎಂಬುದು ಒಂದು ಪ್ರೀತಿಯ ಮರ………

ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ……..

ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ. ಕಳೆದ ವರ್ಷ ಕಾರ್ಗಿಲ್ ಯುದ್ಧ ನಡೆದ ಕಾಶ್ಮೀರದ ಆ ಹಿಮಾಚ್ಛಾದಿತ ಪ್ರದೇಶದಲ್ಲಿರುವ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದೆ. ಆ ಯುದ್ಧದಲ್ಲಿ ಮಡಿದವರ ಸಮಾಧಿ, ಪ್ರತಿಕೃತಿ, ಹೆಸರುಗಳು ಮತ್ತು ಆ ಬಗ್ಗೆ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಸಹ ವೀಕ್ಷಿಸಿದೆ…..

ಅತ್ಯಂತ ಕಡಿಮೆ ಆಮ್ಲಜನಕ, ಮೈನಸ್ ಡಿಗ್ರಿ ಸೆಲ್ಸಿಯಸ್ ನ ಕೊರೆಯುವ ಚಳಿ, ಕಣ್ಣ ನೋಟಕ್ಕೆ ನಿಲುಕದಷ್ಟು ಎತ್ತರದ ಪರ್ವತಗಳು ಮತ್ತು ಆಳದ ಪ್ರಪಾತಗಳ ನಡುವೆ ಮನುಷ್ಯ ಜೀವಿ ಶತ್ರುಗಳೊಂದಿಗೆ ಹೋರಾಡುವುದನ್ನು ಕಲ್ಪಿಸಿಕೊಳ್ಳುವುದು ಸಾಮಾನ್ಯರಿಗೆ ಸಾಧ್ಯವಿಲ್ಲ. ಅಷ್ಟು ಭಯಾನಕ ಪ್ರದೇಶವದು. ಪ್ರವಾಸಿಗರಿಗೆ ಸುಂದರ ರಮಣೀಯ ಎನಿಸುತ್ತದೆ. ಆದರೆ ಜೀವದ ಹಂಗು ತೊರೆದು ಹೋರಾಡುವ ಯೋಧರಿಗೆ……

ಸೈನಿಕರ ಸಾಹಸಗಾಥೆಗಳು ರೋಮಾಂಚನ ಮತ್ತು ಅಭಿಮಾನ ಮೂಡಿಸುವಂತೆ ಇರುತ್ತದೆ ನಿಜ ಹಾಗೆಯೇ ಅವರ ಸಾವು ನೋವುಗಳು ಒಡಲಾಳದಲ್ಲಿ ಕರುಳು ಕಿವುಚಿದಂತಾಗುತ್ತದೆ. ಅವರು ಬದುಕಿದ್ದಿದ್ದರೆ……,

ಆದ್ದರಿಂದ ಅದನ್ನು ವಿಜಯೋತ್ಸವ ಎಂದು ಕರೆಯಲು ಮನಸ್ಸು ಹಿಂಜರಿಯುತ್ತದೆ. ಆ ಯುದ್ದದಲ್ಲಿ ಕೇವಲ ಭಾರತದ ಸೈನಿಕರು ಮಾತ್ರವಲ್ಲ ವಿರೋಧಿ ಪಡೆಯ ಇನ್ನೂ ಹಲವಾರು ಜನರು ಸತ್ತಿದ್ದಾರೆ. ಸಾವಿನ ಆಟ ವಿಜಯೋತ್ಸವ ಆಗುವುದಿಲ್ಲ. ಆದರೂ ಸಾಮಾನ್ಯ ಮನಸ್ಥಿತಿಯಲ್ಲಿ ಆ ಘಟನೆಗಳನ್ನು ನೋಡೋಣ….

ಭಾರತ ಎಂಬುದು ಒಂದು ಪ್ರೀತಿಯ ಮರ…..

ಕಾರ್ಗಿಲ್ ಯುದ್ಧ…..

ಮೇ 3 – ಜುಲೈ ‌26 – 1999

ಭಾರತದ ಜಯ – ಪಾಕಿಸ್ತಾನದ ಸೋಲು –
ಪಾಕಿಸ್ತಾನದ್ದೇ ಕುತಂತ್ರ —-

ಆದರೆ ಇದು ವಿಜಯೋತ್ಸವವೇ ಅಥವಾ ಹುತಾತ್ಮ ಜೀವಗಳ ಆಶ್ರುತರ್ಪಣವೇ…….

ಸತ್ತಿದ್ದು ಮನುಷ್ಯರಾಗಿದ್ದು ಬದುಕಲು ಸೈನಿಕ ಎಂಬ ದೇಶ ಸೇವೆಯ ವೃತ್ತಿ ಆರಿಸಿಕೊಂಡ ಭಾರತ ಮತ್ತು ಪಾಕಿಸ್ತಾನದ ಅಮಾಯಕ ಸೈನಿಕರು ಜೊತೆಗೆ ದಾರಿ ತಪ್ಪಿ ಭಯೋತ್ಪಾದಕರಾದವರೂ ಸೇರಿದ್ದರು.

ಪರ್ವೇಜ್ ಮುಷರಫ್ ಎಂಬ ವ್ಯಕ್ತಿಯ ತೆವಲಿಗೆ ಸಾವಿರಾರು ಜೀವಗಳ ಬಲಿ……..

ಆಕ್ರಮಣ ಮಾಡಿದವರೂ, ರಕ್ಷಣೆಗೆ ಹೋರಾಡಿದವರು ಇಬ್ಬರೂ ಹತ್ಯೆಗೊಳಗಾದರು. ಗೌರವ ಪೂರ್ವಕವಾಗಿ ಸತ್ತ ಸೈನಿಕರನ್ನು ಹುತಾತ್ಮರು ಎಂದು ಎರಡೂ ದೇಶದ ಜನ ಕರೆಯಬಹುದು. ಆದರೆ ಅವರನ್ನು ಮತ್ತೆ ಮರಳಲಾಗದ ಲೋಕಕ್ಕೆ ನಾವೇ ಕಳುಹಿಸಿದೆವು.

ಭಾರತೀಯರಾದ ನಾವು ಇದನ್ನು ಸಂಭ್ರಮದಿಂದ ವಿಜಯೋತ್ಸವ ಎಂದು ಆಚರಿಸುತ್ತೇವೆ. ಪಾಕಿಸ್ತಾನಿಯರು ಇದನ್ನು ಮರೆಯಲು ಪ್ರಯತ್ನಿಸುತ್ತಾರೆ.

ಆದರೆ ಆ ಘಟನೆಯಲ್ಲಿ ಸತ್ತ ಯೋದರ ತಂದೆ ತಾಯಿ ಮಗ ಮಗಳು ಅಣ್ಣ ತಂಗಿ ತಮ್ಮ ಗೆಳೆಯ ಮುಂತಾದವರು ನೆನಪಿನ ನೋವಿನಿಂದ ನರಳುತ್ತಾರೆ – ಮುದುಡುತ್ತಾರೆ.

ಮಹಾಭಾರತದಲ್ಲಿ ವ್ಯಾಸರು ತುಂಬಾ ಸೂಕ್ಷ್ಮವಾಗಿ ಮತ್ತು ಮಾರ್ಮಿಕವಾಗಿ ಇದನ್ನು ಚಿತ್ರಿಸಿದ್ದಾರೆ. ಯುದ್ಧವನ್ನು ಸಂಪೂರ್ಣ ಗೆದ್ದ ಪಾಂಡವರು ಅದರ ಸಾವು ನೋವಿನ ಭೀಕರತೆಗೆ ಮನನೊಂದು ವೈರಾಗ್ಯದಿಂದ ತಮ್ಮ ಉತ್ತರಾಧಿಕಾರಿಗಳಿಗೆ ರಾಜ್ಯವನ್ನು ಒಪ್ಪಿಸಿ ತೀರ್ಥಯಾತ್ರೆಗೆ ( ಸ್ವರ್ಗಕ್ಕೆ ) ಹೊರಡುತ್ತಾರೆ. ಅವರು ಆ ಯುದ್ದದ ವಿಜಯವನ್ನು ಸಂಭ್ರಮಿಸುವುದಿಲ್ಲ. ಏಕೆಂದರೆ….

ಯುದ್ಧ ಒಂದು ಘರ್ಷಣೆ,
ಯುದ್ಧ ಒಂದು ಸಾವಿನ ಆಟ,
ಯುದ್ಧ ಒಂದು ದುರಂತ,
ಯುದ್ಧ ಒಂದು ಅಹಂಕಾರ,
ಯುದ್ಧ ಒಂದು ದುರಾಸೆ,
ಯುದ್ಧ ಒಂದು ಪಾಠ,
ಯುದ್ಧ ಒಂದು ಅನುಭವ,
ಯುದ್ಧ ಒಂದು ರಕ್ಷಣಾ ವ್ಯೂಹ,
ಯುದ್ಧ ಒಂದು ಅನಿವಾರ್ಯ ಕರ್ತವ್ಯ,

ಸಂಭ್ರಮಕ್ಕಿಂತ ಸಹಾನುಭೂತಿಯೇ ಹೆಚ್ಚು ಪರಿಣಾಮಕಾರಿ.

ಯುದ್ಧ ಮಾಡಿದವರು ನಾವಲ್ಲ,
ಯುದ್ಧ ಗೆದ್ದವರು ನಾವಲ್ಲ,
ಅದು ಸೈನಿಕರು.
ನಾವೇನಿದ್ದರೂ ಅದರ ಫಲಾನುಭವಿಗಳು ಮಾತ್ರ.

ದುಷ್ಟ ಪರ್ವೇಜ್ ಮುಷರಫ್ ಎಂಬುವವನ ಅಧಿಕಾರ ದಾಹಕ್ಕೆ, ಶಾಶ್ವತ ಗಾಯಗಳಾದ, ಶಾಶ್ವತ ಶವಗಳಾದ ಪಾಕಿಸ್ತಾನ ಮತ್ತು ಭಾರತದ ಸೈನಿಕರನ್ನು, ಅವರ ಪ್ರೀತಿ ಪಾತ್ರರನ್ನು ಮೌನದಿಂದ ನೆನೆಯುತ್ತಾ………

ಸತ್ತವರು ಭೂಮಿಯ ಮೇಲಿನ ಮನುಷ್ಯ ಪ್ರಾಣಿಗಳು…..

ಉಳಿದದ್ದೆಲ್ಲಾ ಅವನ ಭ್ರಮೆ ಮತ್ತು ಸ್ವಾರ್ಥ…..

ಮನುಷ್ಯ ಕುಲಂ ತಾನೊಂದು ವಲಂ…..

ವಿಶ್ವ ಮಾನವ ಪ್ರಜ್ಞೆಯೇ ನಮ್ಮನ್ನು ವಿಶಾಲತೆಯೆಡೆಗೆ – ನೆಮ್ಮದಿಯೆಡೆಗೆ – ಬದುಕಿನ ‌ಸಾರ್ಥಕತೆಯೆಡೆಗೆ ಸಾಗುವಂತೆ ಮಾಡುತ್ತದೆ.

ಹೌದು ಹೇಳಬಹುದು…..

ಭಾರತ ಗೆದ್ದಿತು, ದುಷ್ಟ ಪಾಕಿಸ್ತಾನ ಸೋತಿತು.
ಅದರ ನೆನಪಿನಲ್ಲಿ ಸಂಭ್ರಮ ಆಚರಿಸಿ. ಅದಕ್ಕೆ ಸಾಕಷ್ಟು ಜನರು ಚಪ್ಪಾಳೆ ಹೊಡೆಯಬಹುದು. ಆದರೆ ಈ ದಿನದ ನೆನಪುಗಳು ಸಾರ್ಥಕವಾಗುವುದು ಮುಂದೆ ಯುದ್ದವಾಗದಂತೆ ತಡೆದು ಸೈನಿಕರು ಸಾಯದಂತೆ ತಡೆಯುವ ಮಾರ್ಗಗಳ ಹುಡುಕಾಟದಲ್ಲಿ ಮಾತ್ರ.

ದೇಶದ ರಕ್ಷಣೆ ಬಹಳ ಮುಖ್ಯ. ಇದೇ ಬಹುದೊಡ್ಡ ಸತ್ಯ. ಅದಕ್ಕೆ ಬಲಶಾಲಿಗಳಾಗಬೇಕು ನಿಜ.‌ ಆದರೆ ಯಾರು ಬಲಶಾಲಿಗಳು, ಎಷ್ಟು ಬಲಶಾಲಿಗಳು, ಯಾವುದರಲ್ಲಿ ಬಲಶಾಲಿಗಳು, ಆ ಬಲಶಾಲಿಗಳು ಎಷ್ಟು ಶಾಶ್ವತ ಎಂಬ ಕಾಡುವ ಪ್ರಶ್ನೆಗೆ…..

ಒಂದು ಮರಕ್ಕಿಂತ ಮತ್ತೊಂದು ‌ದೊಡ್ಡ ಮರ ಬೆಳೆಯುತ್ತಲೇ ಇರುತ್ತದೆ. ಪ್ರತಿ ಮರವೂ ತಾನೇ ಬಲಶಾಲಿ ಎಂದು ಕೊಳ್ಳುತ್ತದೆ. ಆದರೆ ದ್ವೇಷದ ಮರ ತನ್ನ ಅಹಂ ನಿಂದಲೇ ನಾಶವಾಗುತ್ತದೆ. ಪ್ರೀತಿಯ ಮರ ಬೆಳೆಯುತ್ತಲೇ ಇರುತ್ತದೆ…..

ಭಾರತ ಎಂಬುದು ಒಂದು ಪ್ರೀತಿಯ ಮರ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

14 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

16 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

20 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago