ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಭಾರತೀಯರಲ್ಲಿ ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಎನ್.ಸಿ.ಸಿ ನಿವೃತ್ತ ಅಧಿಕಾರಿ ಮೇಜರ್ ಎಸ್.ಮಹಾಬಲೇಶ್ವರ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಎನ್.ಸಿ.ಸಿ ಘಟಕದಿಂದ ನಡೆದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯರು ಆಪರೇಶನ್ ವಿಜಯ್ ಮೂಲಕ ಕಾರ್ಗಿಲ್-ದ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. 1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು ಎಂದರು.
ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಅಂಗವಾಗಿ ಎನ್.ಸಿ.ಸಿ ವಿದ್ಯಾರ್ಥಿಗಳು ಕಾರ್ಗಿಲ್ ಸೈನಿಕರನ್ನು ಸ್ಮರಿಸಿ ಭಾರತದ ಭೂಪಟ ರಚನೆ ಮಾಡಿ ದೀಪ ಬೆಳಗಿಸಿ ಗೌರವ ನಮನವನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ, ಉಪಪ್ರಾಂಶುಪಾಲ ಎಸ್.ಎಸ್.ಶಿವಶಂಕರ್, ಎನ್.ಸಿ.ಸಿ ಅಧಿಕಾರಿಗಳಾದ ಎನ್.ಶ್ರೀನಿವಾಸ, ಪ್ರವೀಣ್, ಶ್ರೀಕಾಂತ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
View Comments
Sure 😊