ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಭಾರತೀಯರಲ್ಲಿ ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಎನ್.ಸಿ.ಸಿ ನಿವೃತ್ತ ಅಧಿಕಾರಿ ಮೇಜರ್ ಎಸ್.ಮಹಾಬಲೇಶ್ವರ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಎನ್.ಸಿ.ಸಿ ಘಟಕದಿಂದ ನಡೆದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯರು ಆಪರೇಶನ್ ವಿಜಯ್ ಮೂಲಕ ಕಾರ್ಗಿಲ್-ದ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. 1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು ಎಂದರು.
ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಅಂಗವಾಗಿ ಎನ್.ಸಿ.ಸಿ ವಿದ್ಯಾರ್ಥಿಗಳು ಕಾರ್ಗಿಲ್ ಸೈನಿಕರನ್ನು ಸ್ಮರಿಸಿ ಭಾರತದ ಭೂಪಟ ರಚನೆ ಮಾಡಿ ದೀಪ ಬೆಳಗಿಸಿ ಗೌರವ ನಮನವನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ, ಉಪಪ್ರಾಂಶುಪಾಲ ಎಸ್.ಎಸ್.ಶಿವಶಂಕರ್, ಎನ್.ಸಿ.ಸಿ ಅಧಿಕಾರಿಗಳಾದ ಎನ್.ಶ್ರೀನಿವಾಸ, ಪ್ರವೀಣ್, ಶ್ರೀಕಾಂತ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
View Comments
Sure 😊