ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆ ಕರೇನಹಳ್ಳಿಯಲ್ಲಿರುವ ಶ್ರೀ ಅಭಯಚೌಡೇಶ್ವರಿದೇವಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಹಿನ್ನೆಲೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಭಕ್ತಾಧಿಗಳು ಮಣ್ಣಿನ ಹಣತೆಯಲ್ಲಿ ಎಣ್ಣೆ ಹಾಕಿ ವಿವಿಧ ಆಕೃತಿಗಳಲ್ಲಿ ಜೋಡಿಸಿ ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು. ಲಕ್ಷದೀಪೋತ್ಸವ ಅಂಗವಾಗಿ ಇಡೀ ದೇವಾಲಯ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸಿತು.
ಲಕ್ಷದೀಪೋತ್ಸವ ಹಿನ್ನೆಲೆ ಶ್ರೀ ಅಭಯಚೌಡೇಶ್ವರಿದೇವಿಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಮಹಾಮಂಗಳಾರತಿ ಸೇರಿದಂತೆ ಇತರೆ ಪೂಜಾಕೈಂಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಭಕ್ತಾಧಿಗಳು ಇಂದು ಬೆಳಗ್ಗೆಯಿಂದಲೇ ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು….
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…