ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆ ಕರೇನಹಳ್ಳಿಯಲ್ಲಿರುವ ಶ್ರೀ ಅಭಯಚೌಡೇಶ್ವರಿದೇವಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಹಿನ್ನೆಲೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಭಕ್ತಾಧಿಗಳು ಮಣ್ಣಿನ ಹಣತೆಯಲ್ಲಿ ಎಣ್ಣೆ ಹಾಕಿ ವಿವಿಧ ಆಕೃತಿಗಳಲ್ಲಿ ಜೋಡಿಸಿ ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು. ಲಕ್ಷದೀಪೋತ್ಸವ ಅಂಗವಾಗಿ ಇಡೀ ದೇವಾಲಯ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸಿತು.
ಲಕ್ಷದೀಪೋತ್ಸವ ಹಿನ್ನೆಲೆ ಶ್ರೀ ಅಭಯಚೌಡೇಶ್ವರಿದೇವಿಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ, ಮಹಾಮಂಗಳಾರತಿ ಸೇರಿದಂತೆ ಇತರೆ ಪೂಜಾಕೈಂಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಭಕ್ತಾಧಿಗಳು ಇಂದು ಬೆಳಗ್ಗೆಯಿಂದಲೇ ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು….
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…