ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago