ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

6 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

21 hours ago