ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

17 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

22 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago