ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

7 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

9 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

20 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago