ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

3 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

7 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

21 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

21 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

22 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

23 hours ago