ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

6 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

9 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

11 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago