ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ ಎಂದು ಪ್ರಗತಿಪರ ಚಿಂತಕ, ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ ಅವರಿಗೆ ‘ಕನ್ನಡ ಜನಪರ ಸತ್ಯ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಪೋರೇಟ್ ನೀತಿಯನ್ನ ವಿರೋಧಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಜನಪರವಾಗಿ ಹೋರಾಟ ಮಾಡುವ ತನ್ನ ಸುತ್ತಲಿನ ಜನರ ಒಳಿತಿಗಾಗಿ ಶ್ರಮಿಸಿದವರು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ. ಹೀಗಾಗಿಯೇ ಕರ್ನಾಟಕ 50ನೇ ವರ್ಷಾಚರಣೆ ಸಂದರ್ಭದಲ್ಲಿ ಸಮಾನ ಮನಸ್ಕರು ನಗದು ಪುರಸ್ಕಾರ ನೀಡುವ ಮೂಲಕ ಅಭಿನಂದಿಸುತ್ತಿರುವುದು ಅರ್ಥಪೂರ್ಣವಾಗಿದೆ. ಇದು ಇತರೆ ಹೋರಾಟಗಾರರಿಗೆ ಜನರಪರವಾಗಿ ಕೆಲಸ ಮಾಡುವ ಸ್ಫೂರ್ತಿ ತುಂಬದಲಿದೆ  ಎಂದರು.

ಚಳುವಳಿಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡುಮೆಗು ಮಾರ್ಗಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದರು.

ನಗರಸಭಾ ಸದಸ್ಯ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಪರಭಾಷಾ ಚಿತ್ರಗಳ ವಿರುದ್ಧದ ಪ್ರತಿಭಟನೆಗೆ ಸೀಮಿತವಾಗಿದ್ದ ನಮ್ಮ ಹೋರಾಟಗಳು ನಂತರ ದಿನಗಳಲ್ಲಿ ನಾಡಿನ ನೆಲ,ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಹೋರಾಟಗಳಾಗಿ ರೂಪುಗೊಂಡಿದ್ದು ಈಗ ಇತಿಹಾಸ. 80ರ ದಶಕದಲ್ಲಿ ನಗರದಲ್ಲಿ ಹುಟ್ಟಿಕೊಂಡ ಕನ್ನಡ ಜಾಗೃತ ಪರಿಷತ್ ಅಡಿಯಲ್ಲಿ ಇಡೀ ರಾಜ್ಯವೇ ಇಲ್ಲಿನ ಕನ್ನಡಪರ, ರೈತರಪರ ಹಾಗೂ ದಲಿತಪರ ಚಳುವಳಿಗೆಗಳನ್ನು ಗುರುತಿಸುವಂತೆ ಹಲವಾರು ದಾಖಲರ್ಹ ಹೋರಾಟಗಳು ನಡೆದಿವೆ ಎಂದರು.

ಎಲ್ಲಾ ಹೋರಾಟಗಳಲ್ಲೂ ಡಾ.ವೆಂಕಟರೆಡ್ಡಿ, ಜಿ.ಸತ್ಯನಾರಾಯಣ ಸೇರಿದಂತೆ ಹಲವಾರು ಜನ ತೊಡಗಿಸಿಕೊಂಡಿದ್ದರು. ಇದರ ಫಲವಾಗಿಯೇ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಲು ಕಾರಣವಾಯಿತು. ಇದರಿಂದ ಕನ್ನಡಿಗರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಇಂದಿನ ಯುವ ಪೀಳಿಗೆ ಹೋರಾಟಗಳ ಇತಿಹಾಸವನ್ನು ತಿಳಿಯುವ ಮೂಲಕ ಸ್ವಾಭಿಮಾನದ ಬದುಕು ರೂಪಿಕೊಳ್ಳಲು ನಾಡಿನ ಏಳಿಗೆಗೆ ಶ್ರಮಿಸಲು ಸಜ್ಜಾಗಬೇಕು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ, ಚಳುವಳಿಗಾರರು ಎಂದೂ ಸಹ ಪ್ರಶಸ್ತಿ, ಅಭಿನಂದನೆಗಳಿಗಾಗಿ ಹೋರಾಟಗಳನ್ನು ನಡೆಸುವುದಿಲ್ಲ. ಸದಾ ತಮ್ಮ ಸುತ್ತಲಿನ ಸಮಾಜದ ನೆಮ್ಮದಿಗಾಗಿ ತುಡಿಯಲಿದೆ. ಆದರೆ ಈ ತುಡಿತವನ್ನು ಇಳಿ ವಯಸ್ಸಿನಲ್ಲಿ ಗುರುತಿಸಿ ಗೌರವಿಸಿದಾಗ ಹೋರಾಟಗಾರರ ಬದುಕು ಸಾರ್ಥಕವಾಗಲಿದೆ ಎಂದರು.

ಧಾರವಾಡದಲ್ಲಿನ ವಿದ್ಯಾವರ್ಧಕ ಸಂಘದಂತೆ ಇಲ್ಲಿನ ಕನ್ನಡ ಜಾಗೃತ ಪರಿಷತ್ ಹಲವಾರು ಜನಪರ ಹೋರಾಟಗಳಲ್ಲಿ ಕೇಂದ್ರ ಸಂಸ್ಥೆಯಾಗಿ ಇಂದಿಗೂ ಕ್ರೀಯಾಶೀಲವಾಗಿದೆ. ಇದರ ಹೆಸರಿನಲ್ಲಿ ಪ್ರತಿ ವರ್ಷ ಇಬ್ಬರು ಹಿರಿಯರು, ಒಬ್ಬ ಯುವ ಬರಹಗಾರರು ಅಥವಾ ಹೋರಾಟಗಾರರನ್ನು ಗುರುತಿಸಿ ನಗದು ಪುರಸ್ಕಾರ ನೀಡುವ ಸಮಾರಂಭ ನಿರಂತರವಾಗಿ ನಡೆಯಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಲೇಖಕ ಮಂಜುನಾಥ ಎಂ.ಅದ್ದೆ ಘೋಷಣೆ ಮಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಎಸ್.ಮಹಾಬಲೇಶ್ವರ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಸೇರಿದಂತೆ ಹಲವಾರು ಜನ ಹೋರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

34 minutes ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

12 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

20 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago