ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಹೇಳಿದರು.
ತಾಲೂಕಿನ ಮಜರಾಹೋಸಹಳ್ಳಿ ಗ್ರಾ. ಪಂಚಾಯಿತಿ ವ್ಯಾಪ್ತಿಗೆ ಬರುವ ಐಟಿಸಿ ಪೆಟ್ರೋ ಕಾರ್ಖಾನೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಮಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.
ಮತದಾನದ ದಿನ ಸಾರ್ವತ್ರಿಕ ರಜೆ ಇರುತ್ತದೆ, ಆ ದಿನದಂದು ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಸದೃಢಗೊಳಿಸಬೇಕು.
ನಂತರ ಮಜರಾಹೋಸಹಳ್ಳಿ ಗ್ರಾ.ಪಂ ಪಿಡಿಓ ರವೀಂದ್ರ ಮಾತನಾಡಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕರ ಪತ್ರ ಹಂಚಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಕಾರ್ಖಾನೆಗೂ ಭೇಟಿ ನೀಡಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ವಚ್ಛವಾಹಿನಿಯಲ್ಲಿ ಪ್ರತಿದಿನ ಮತದಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಕುಮಾರ್, ಪಿಡಿಓ ಕುಮಾರ್, ಕಾರ್ಖಾನೆ ಸಿಬ್ಬಂದಿ ಕಾರ್ಮಿಕರು ಸೇದಂತೆ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…