ಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು

ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಹೇಳಿದರು.

ತಾಲೂಕಿನ ಮಜರಾಹೋಸಹಳ್ಳಿ ಗ್ರಾ. ಪಂಚಾಯಿತಿ ವ್ಯಾಪ್ತಿಗೆ ಬರುವ ಐಟಿಸಿ ಪೆಟ್ರೋ ಕಾರ್ಖಾನೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಮಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.

ತಾಲೂಕಿನಾದ್ಯಂತ ಮತದಾನ ಪ್ರಮಾಣ ಹೆಚ್ಚಿಸಲು ಈಗಾಗಲೇ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಂಗೋಲಿ ಸ್ಪರ್ಧೆ, ವಾಲಿಬಾಲ್ ಕ್ರೀಡೆ, ಬೈಕ್ ರ‍್ಯಾಲಿ ಸೇರಿದಂತೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಮತದಾನದ ದಿನ ಸಾರ್ವತ್ರಿಕ ರಜೆ ಇರುತ್ತದೆ, ಆ ದಿನದಂದು ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಸದೃಢಗೊಳಿಸಬೇಕು.

ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮುಕ್ತ ಮತ್ತು ನಿರ್ಭೀತಿಯಿಂದ ಮತದಾನ ಮಾಡಿ, ಉತ್ತಮ ಸಮಾಜದ  ನಿರ್ಮಾಣಕ್ಕೆ ಎಲ್ಲದರೂ ಸಹಕರಿಸಬೇಕು ಎಂದು ಮನವಿ  ಮಾಡಿದರು.

ನಂತರ ಮಜರಾಹೋಸಹಳ್ಳಿ ಗ್ರಾ.ಪಂ ಪಿಡಿಓ ರವೀಂದ್ರ ಮಾತನಾಡಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕರ ಪತ್ರ ಹಂಚಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಕಾರ್ಖಾನೆಗೂ ಭೇಟಿ ನೀಡಿ ಮತದಾನದ  ಮಹತ್ವದ ಬಗ್ಗೆ  ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ವಚ್ಛವಾಹಿನಿಯಲ್ಲಿ ಪ್ರತಿದಿನ ಮತದಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಕುಮಾರ್, ಪಿಡಿಓ ಕುಮಾರ್, ಕಾರ್ಖಾನೆ ಸಿಬ್ಬಂದಿ ಕಾರ್ಮಿಕರು ಸೇದಂತೆ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

14 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

15 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

23 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago