ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಹೇಳಿದರು.
ತಾಲೂಕಿನ ಮಜರಾಹೋಸಹಳ್ಳಿ ಗ್ರಾ. ಪಂಚಾಯಿತಿ ವ್ಯಾಪ್ತಿಗೆ ಬರುವ ಐಟಿಸಿ ಪೆಟ್ರೋ ಕಾರ್ಖಾನೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಮಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.
ಮತದಾನದ ದಿನ ಸಾರ್ವತ್ರಿಕ ರಜೆ ಇರುತ್ತದೆ, ಆ ದಿನದಂದು ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಸದೃಢಗೊಳಿಸಬೇಕು.
ನಂತರ ಮಜರಾಹೋಸಹಳ್ಳಿ ಗ್ರಾ.ಪಂ ಪಿಡಿಓ ರವೀಂದ್ರ ಮಾತನಾಡಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕರ ಪತ್ರ ಹಂಚಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಕಾರ್ಖಾನೆಗೂ ಭೇಟಿ ನೀಡಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ವಚ್ಛವಾಹಿನಿಯಲ್ಲಿ ಪ್ರತಿದಿನ ಮತದಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಕುಮಾರ್, ಪಿಡಿಓ ಕುಮಾರ್, ಕಾರ್ಖಾನೆ ಸಿಬ್ಬಂದಿ ಕಾರ್ಮಿಕರು ಸೇದಂತೆ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…