ಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು

ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಹೇಳಿದರು.

ತಾಲೂಕಿನ ಮಜರಾಹೋಸಹಳ್ಳಿ ಗ್ರಾ. ಪಂಚಾಯಿತಿ ವ್ಯಾಪ್ತಿಗೆ ಬರುವ ಐಟಿಸಿ ಪೆಟ್ರೋ ಕಾರ್ಖಾನೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಮಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು.

ತಾಲೂಕಿನಾದ್ಯಂತ ಮತದಾನ ಪ್ರಮಾಣ ಹೆಚ್ಚಿಸಲು ಈಗಾಗಲೇ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಂಗೋಲಿ ಸ್ಪರ್ಧೆ, ವಾಲಿಬಾಲ್ ಕ್ರೀಡೆ, ಬೈಕ್ ರ‍್ಯಾಲಿ ಸೇರಿದಂತೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಮತದಾನದ ದಿನ ಸಾರ್ವತ್ರಿಕ ರಜೆ ಇರುತ್ತದೆ, ಆ ದಿನದಂದು ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಸದೃಢಗೊಳಿಸಬೇಕು.

ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮುಕ್ತ ಮತ್ತು ನಿರ್ಭೀತಿಯಿಂದ ಮತದಾನ ಮಾಡಿ, ಉತ್ತಮ ಸಮಾಜದ  ನಿರ್ಮಾಣಕ್ಕೆ ಎಲ್ಲದರೂ ಸಹಕರಿಸಬೇಕು ಎಂದು ಮನವಿ  ಮಾಡಿದರು.

ನಂತರ ಮಜರಾಹೋಸಹಳ್ಳಿ ಗ್ರಾ.ಪಂ ಪಿಡಿಓ ರವೀಂದ್ರ ಮಾತನಾಡಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕರ ಪತ್ರ ಹಂಚಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಕಾರ್ಖಾನೆಗೂ ಭೇಟಿ ನೀಡಿ ಮತದಾನದ  ಮಹತ್ವದ ಬಗ್ಗೆ  ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ವಚ್ಛವಾಹಿನಿಯಲ್ಲಿ ಪ್ರತಿದಿನ ಮತದಾನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಕುಮಾರ್, ಪಿಡಿಓ ಕುಮಾರ್, ಕಾರ್ಖಾನೆ ಸಿಬ್ಬಂದಿ ಕಾರ್ಮಿಕರು ಸೇದಂತೆ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago