ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.
ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…