ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.
ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…