ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.
ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…