Categories: ಕೋಲಾರ

ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ನಿರಂತರವಾಗಿ ಆಡಳಿತ ಮಂಡಳಿ ನಿರಾಕರಿಸಿಕೊಂಡು ಬಂದಿದೆ ವೇತನ ಹೆಚ್ಚಳದ ಸಂಬಂಧಿಸಿದಂತೆ ಕಾನೂನಿನಲ್ಲಿ ಇದ್ದರೂ ಜಾರಿ ಮಾಡಲು ಹಿಂದೇಟು ಹಾಕಿದ್ದಾರೆ. ಕಾರ್ಖಾನೆಯ ದೃಢೀಕೃತ ಸ್ಥಾಯಿ ಆದೇಶಗಳನ್ನು ಪಾಲಿಸುವ ಪತ್ರಕ್ಕೆ ಸಂಘದ ಸದಸ್ಯರು ಸಹಿ ಹಾಕಿದ್ದರೂ ಕಂಪನಿಯಲ್ಲಿನ ಹಿಂದೆ ಇದ್ದ 17 ಜನ ಕಾರ್ಮಿಕರನ್ನು ವೇತನ ಸಮಾನತೆಯೊಂದಿಗೆ ಕಾರ್ಮಿಕರ ಗ್ರೇಡಿಗೆ ಅವರನ್ನು ತರಬೇಕು ಅವರಿಗೆ ಸಮಾನ ಸೇವಾವಧಿಯ ಕಾರ್ಮಿಕರಿಗೆ ನೀಡುವ ವೇತನಕ್ಕೆ ಸಮಾನವಾಗಿ ವೇತನ ಅವರಿಗೂ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಉಪಾಧ್ಯಕ್ಷರಾದ ರಮೇಶ್, ಶರತ್ ಖಜಾಂಚಿ ಮಂಜುನಾಥ್, ಸಹಕಾರ್ಯದರ್ಶಿ ಪೃಥ್ವಿ, ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago