Categories: ಕೋಲಾರ

ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ನಿರಂತರವಾಗಿ ಆಡಳಿತ ಮಂಡಳಿ ನಿರಾಕರಿಸಿಕೊಂಡು ಬಂದಿದೆ ವೇತನ ಹೆಚ್ಚಳದ ಸಂಬಂಧಿಸಿದಂತೆ ಕಾನೂನಿನಲ್ಲಿ ಇದ್ದರೂ ಜಾರಿ ಮಾಡಲು ಹಿಂದೇಟು ಹಾಕಿದ್ದಾರೆ. ಕಾರ್ಖಾನೆಯ ದೃಢೀಕೃತ ಸ್ಥಾಯಿ ಆದೇಶಗಳನ್ನು ಪಾಲಿಸುವ ಪತ್ರಕ್ಕೆ ಸಂಘದ ಸದಸ್ಯರು ಸಹಿ ಹಾಕಿದ್ದರೂ ಕಂಪನಿಯಲ್ಲಿನ ಹಿಂದೆ ಇದ್ದ 17 ಜನ ಕಾರ್ಮಿಕರನ್ನು ವೇತನ ಸಮಾನತೆಯೊಂದಿಗೆ ಕಾರ್ಮಿಕರ ಗ್ರೇಡಿಗೆ ಅವರನ್ನು ತರಬೇಕು ಅವರಿಗೆ ಸಮಾನ ಸೇವಾವಧಿಯ ಕಾರ್ಮಿಕರಿಗೆ ನೀಡುವ ವೇತನಕ್ಕೆ ಸಮಾನವಾಗಿ ವೇತನ ಅವರಿಗೂ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಉಪಾಧ್ಯಕ್ಷರಾದ ರಮೇಶ್, ಶರತ್ ಖಜಾಂಚಿ ಮಂಜುನಾಥ್, ಸಹಕಾರ್ಯದರ್ಶಿ ಪೃಥ್ವಿ, ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago